ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
Cross references
ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ.
ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.