ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
Cross references
ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.