ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
Cross references
ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;