ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
Cross references
ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.
ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.