ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
Cross references
ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.