ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
Cross references
(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.