ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
Cross references
ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.
ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.