ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
Cross references
ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.