ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
Cross references
ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.
ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.