ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
Cross references
ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.
ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.