ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
Cross references
ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.
ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.
ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು.
ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.