ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
Cross references
ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.