ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
Cross references
ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.
ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
ಇಗೋ, ಇಸ್ರಾಯೇಲ್ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.
ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.