ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
Cross references
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.
ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.