ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
Cross references
ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;
ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.
ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.
ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.