ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
Cross references
ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು.
ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.