ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
Cross references
ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.