ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
Cross references
ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ
ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.
ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.