ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
Cross references
ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.