ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
Cross references
ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.