ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
Cross references
ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.
ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.
ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.