ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
Cross references
ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.