ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
Cross references
ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.