ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
Cross references
ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.