ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
Cross references
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.