ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
Cross references
ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು.
ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ
ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.