ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
Cross references
ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು.
ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.
ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.