ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
Cross references
ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ
ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--