ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
Cross references
ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.