Home Bibles ಸಾಮೇತಿಗಳು 19:6 · ಕನ್ನಡ ಬೈಬಲ್
ಸಾಮೇತಿಗಳು 19:6 · ಕನ್ನಡ ಬೈಬಲ್

ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.

Cross references

ಆದಿಕಾಂಡ 32:20

ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.

ಆದಿಕಾಂಡ 42:6

ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.

ಆದಿಕಾಂಡ 43:15

ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.

2 ಸಮುವೇಲ 19:19

ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.

ಯೋಬ 29:24

ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.

ಕೀರ್ತನೆಗಳು 45:12

ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.

ಸಾಮೇತಿಗಳು 16:15

ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.

ಸಾಮೇತಿಗಳು 17:8

ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.

ಸಾಮೇತಿಗಳು 18:16

ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.

ಸಾಮೇತಿಗಳು 19:12

ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.

ಸಾಮೇತಿಗಳು 21:14

ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.

ಸಾಮೇತಿಗಳು 29:26

ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.

ಮತ್ತಾಯ 2:11

ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.

ರೋಮಾಪುರದವರಿಗೆ 6:23

ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

Interlinear

Choose Theme