ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
Cross references
ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.
ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.