ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
Cross references
ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.
ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.