ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
Cross references
ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಓ ಕರ್ತನೇ, ನಿನ್ನನ್ನು ಕೀರ್ತಿ ಸುವೆನು.
ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.