ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
Cross references
ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.