ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.
Cross references
ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.