ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ.
Cross references
ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.