ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
Cross references
ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ.
ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು.
ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು;
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.