ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
Cross references
ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.
ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.