ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.
Cross references
ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.