ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
Cross references
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ
ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
ಒಳ್ಳೇದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದು ತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವದು.
ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.