ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
Cross references
ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.