ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
Cross references
ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.