ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
Cross references
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.