Home Bibles ಸಾಮೇತಿಗಳು 24:12 · ಕನ್ನಡ ಬೈಬಲ್
ಸಾಮೇತಿಗಳು 24:12 · ಕನ್ನಡ ಬೈಬಲ್

ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?

Cross references

1 ಸಮುವೇಲ 2:6

ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.

1 ಸಮುವೇಲ 16:7

ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.

1 ಸಮುವೇಲ 25:29

ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.

ಯೋಬ 34:11

ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.

ಕೀರ್ತನೆಗಳು 7:9

ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.

ಕೀರ್ತನೆಗಳು 17:3

ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.

ಕೀರ್ತನೆಗಳು 44:21

ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.

ಕೀರ್ತನೆಗಳು 62:12

ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.

ಕೀರ್ತನೆಗಳು 66:9

ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.

ಕೀರ್ತನೆಗಳು 121:3

ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.

ಕೀರ್ತನೆಗಳು 121:8

ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.

ಸಾಮೇತಿಗಳು 5:21

ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.

ಸಾಮೇತಿಗಳು 5:22

ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.

ಸಾಮೇತಿಗಳು 16:2

ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.

ಸಾಮೇತಿಗಳು 21:2

ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.

ಸಭಾಪ್ರಸಂಗಿ 5:8

ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.

ಯೆರೆಮಿಯ 17:10

ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.

ಯೆರೆಮಿಯ 32:19

ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--

ವಿಲಾಪಗಳು 3:36

ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.

ದಾನಿಯೇಲ 5:23

ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.

ಮತ್ತಾಯ 16:27

ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

ಅಪೋಸ್ತಲರ ಕೃತ್ಯಗಳು 17:28

ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.

ರೋಮಾಪುರದವರಿಗೆ 2:6

ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.

ರೋಮಾಪುರದವರಿಗೆ 2:16

ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.

1 ಕೊರಿಂಥದವರಿಗೆ 4:5

ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

2 ಕೊರಿಂಥದವರಿಗೆ 5:10

ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.

ಹೆಬ್ರಿಯರಿಗೆ 4:12

ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ಪ್ರಕಟನೆ 1:18

ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್‌. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.

ಪ್ರಕಟನೆ 2:18

ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,

ಪ್ರಕಟನೆ 2:23

ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.

ಪ್ರಕಟನೆ 20:12

ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ

ಪ್ರಕಟನೆ 22:12

ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.

Interlinear

Choose Theme