ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
Cross references
ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.
ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.