ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
Cross references
ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು.
ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.