ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
Cross references
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು