ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
Cross references
ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.
ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.
ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!