Home Bibles ಸಾಮೇತಿಗಳು 26:4 · ಕನ್ನಡ ಬೈಬಲ್
ಸಾಮೇತಿಗಳು 26:4 · ಕನ್ನಡ ಬೈಬಲ್

ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.

Cross references

ನ್ಯಾಯಾಧಿಪತಿಗಳು 12:1

ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.

2 ಸಮುವೇಲ 19:41

ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.

1 ಅರಸುಗಳು 12:14

ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.

1 ಅರಸುಗಳು 12:16

ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.

2 ಅರಸುಗಳು 14:8

ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.

ಸಾಮೇತಿಗಳು 17:14

ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.

ಸಾಮೇತಿಗಳು 26:5

ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.

ಯೆಶಾಯ 36:21

ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

1 ಪೇತ್ರ 2:21

ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.

1 ಪೇತ್ರ 3:9

ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.

ಯೂದ 1:9

ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.

Interlinear

Choose Theme