ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
Cross references
ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು--
ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು.
ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--
ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.
ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.